ಕುಟ್ರುಪ್ಪಾಡಿ : ಶ್ರೀಕ್ಷೇ.ಧ.ಗ್ರಾ.ಯೋ ,ಕಡಬ ತಾಲೂಕು ಜನಜಾಗೃತಿ ವೇದಿಕೆಯ ವತಿಯಿಂದ ವಿಶ್ವ ಹಿರಿಯರ ದಿನಾಚರಣೆ – ಸಾಧಕರಿಗೆ ಸನ್ಮಾನ

0

ಪುತ್ತೂರು: ಶ್ರೀ,ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್‌ ಕಡಬ ,ತಾಲೂಕು ಜನಜಾಗೃತಿ ವೇದಿಕೆ ಕಡಬ ,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಡಬ ವಲಯ ಇದರ ವತಿಯಿಂದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ವಿಶ್ವ ಹಿರಿಯರ ದಿನಾಚರಣೆ , ಸಾಧಕರಿಗೆ ಸನ್ಮಾನ ಅ.1ರಂದು ನಡೆಯಿತು.
ಕಡಬ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕರುಣಾಕರ ಗೋಗಟೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್‌ ಕೆ.ಸವಣೂರು ವಹಿಸಿದ್ದರು. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಪ್ರವೀಣ್‌ ಕುಮಾರ್‌ ಅವರು ಸಾಧಕರಿಗೆ ಸನ್ಮಾನ ನೆರವೇರಿಸಿದರು.
ವೇದಿಕೆಯಲ್ಲಿ ಕುಟ್ರುಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಮನ,ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್‌ ರೈ ಕೆಡೆಂಜಿ,ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್‌ ಎನ್.ಕೆ , ಚಾರ್ವಾಕ ಪ್ರಾ.ಕೃ.ಪ.ಸ.ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಅಶೋಕ ಗೌಡ ಪಿ., ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಾಳ್ಯ ಇದರ ಅಧ್ಯಕ್ಷ ಚಂದ್ರಶೇಖರ ಗೌಡ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಟ್ರುಪ್ಪಾಡಿ ಇದರ ಅಧ್ಯಕ್ಷ ನಾಗಣ್ಣ ಗೌಡ, ಕಡಬ ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ 5 ಮಂದಿ ಹಿರಿಯ ಸಾಧಕರಿಗೆ ಸನ್ಮಾನ ನಡೆಯಿತು. ಹಿರಿಯ ಸಾಧಕರಾದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್‌ ಕೆ. ಅವರನ್ನು ,ನಾಗಪ್ಪ ಗೌಡ ಪಾಲೆಚ್ಚಾರು, ಪೆರಾಬೆ ಅವರನ್ನು ಸಮಾಜಸೇವೆಗಾಗಿ ಕುಶಾಲಪ್ಪ ಗೌಡ ಕಳುವಾಜೆ ಕಾಯ್ಮಣ ಅವರನ್ನು, ಎ.ಇ.ಕುಟ್ಟಪ್ಪನ್‌ ಶಿರಾಡಿ ಇವರನ್ನು ನಾಟಿವೈದ್ಯ ಸೇವೆಗಾಗಿ ,ಪುಟ್ಟಣ್ಣ ಗೌಡ ಮಿತ್ತಂಡೇಲು ನೂಜಿಬಾಳ್ತಿಲ ಅವರನ್ನು ಧಾರ್ಮಿಕ ಸೇವೆಗಾಗಿ ,ನಾಗಪ್ಪ ಗೌಡ ಪಾಲೆಚ್ಚಾರು ಪೆರಾಬೆ ಅವರನ್ನು ಸಮಾಜ ಸೇವೆಗಾಗಿ ಸನ್ಮಾನಿಸಲಾಯಿತು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಸ್ವಾಗತಿಸಿದರು. ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಾಳ್ಯ ಇದರ ಅಧ್ಯಕ್ಷ ಚಂದ್ರಶೇಖರ ಗೌಡ ವಂದಿಸಿದರು.ಯೋಜನೆಯ ಮೇಲ್ವಿಚಾರಕ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here