ಆಲಂಕಾರು ಗ್ರಾ.ಪಂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

0

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ,ಸ್ವಸಹಾಯ ಸಂಘದ ಒಕ್ಕೂಟಗಳು,ಶ್ರೀ ಲಕ್ಷ್ಮೀ ಸಂಜೀವಿನಿ ಒಕ್ಕೂಟ ಹಾಗೂ ಕೋಟಿ ಚೆನ್ನಯ ಮಿತ್ರವೃಂದ ಆಲಂಕಾರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಆಲಂಕಾರಿನಲ್ಲಿ ನಡೆಯಿತು. ಆಲಂಕಾರು ಪೇಟೆ, ಬಸ್ಸು ತಂಗುದಾಣ , ಅಂಗನವಾಡಿ, ಆರೋಗ್ಯ ಕೇಂದ್ರಗಳನ್ನು ಸ್ವಚ್ಚತೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಸುಶೀಲಾ, ಉಪಾಧ್ಯಕ್ಷರಾದ ರವಿಪೂಜಾರಿ.ಕೆ ಹಾಗು ,ಗ್ರಾ.ಪಂ ಸದಸ್ಯರು, ಮಾಜಿ ತಾ.ಪಂ ಸದಸ್ಯರಾದ ದಯಾನಂದ ಆಲಡ್ಕ, ತಾರ.ಕೆ, ಆಶಾ,ಅಂಗನವಾಡಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು, ಕೋಟಿ ಚೆನ್ನಯ ಮಿತ್ರವೃಂದ ಅಧ್ಯಕ್ಷರಾದ ಜಯಂತ ಪೂಜಾರಿ ನೆಕ್ಕಿಲಾಡಿ ಮತ್ತು ಪದಾಧಿಕಾರಿಗಳು, ಸದಸ್ಯರು, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಶಿಕ್ಷಕರು ಸೇರಿದಂತೆ ಹಲವು ಮಂದಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಗ್ರಾ.ಪಂ ಕಾರ್ಯದರ್ಶಿ ವಸಂತ ಶೆಟ್ಟಿ ಸ್ವಾಗತಿಸಿ, ವಂದಿಸಿದರು,ಗ್ರಾ.ಪಂ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here