ಪೆರ್ಲಂಪಾಡಿ: ಷಣ್ಮುಖದೇವ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್‌ ಉದ್ಘಾಟನೆ

0

ಪೆರ್ಲಂಪಾಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಕಂಪ್ಯೂಟರ್‌ ಶಿಕ್ಷಣವನ್ನು ಪಡೆದುಕೊಳ್ಳಲು ಅಗತ್ಯವಾದ ಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಮಾಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಎಂದು ಪೆರ್ಲಂಪಾಡಿ ಷಣ್ಮುಖದೇವ ಪ್ರೌಢ ಶಾಲೆಯ ಸಂಚಾಲಕ ಶಿವರಾಮ ಭಟ್‌ ಬೀರ್ಣಕಜೆ ಹೇಳಿದ್ದಾರೆ.

ಷಣ್ಮುಖದೇವಾ ಪ್ರೌಢ ಶಾಲೆಯ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಕೊಡುಗೆಯಾಗಿ ನೀಡಿದ 5 ಕಂಪ್ಯೂಟರ್‌ ಗಳನ್ನು ಉದ್ಘಾಟಿಸಿ ಮಾತನಾಡಿದ ಶಿವರಾಮ್‌ ಭಟ್‌ ಬೀರ್ಣಕಜೆ ಕಂಪ್ಯೂಟರ್‌ ಜ್ಞಾನವನ್ನು ಪಡೆದುಕೊಳ್ಳುವ ಮೂಲಕ ಶಾಲೆಯ ವಿದ್ಯಾರ್ಥಿಗಳು ದೇಶದ ಸತ್ಪ್ರಜೆಗಳಾಗಬೇಕು ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಕೃಷ್ಣವೇಣಿ ಎಲ್ಲರನ್ನು ಸ್ವಾಗತಿಸಿದರೆ, ಶಿಕ್ಷಕ ನಂಜುಂಡಪ್ಪ ವಂದಿಸಿದರು. ಶಾಲೆಯ ಅಧ್ಯಾಪಕ ವೃಂದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here