ನವ ಕರ್ನಾಟಕ ಕಟ್ಟಡ ಕಾರ್ಮಿಕ, ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದಿಂದ ರಕ್ತದಾನ ಶಿಬಿರ

0

ಪುತ್ತೂರು: ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಮತ್ತು ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ವತಿಯಿಂದ ಸದಸ್ಯರು ರಕ್ತದಾನ ಮಾಡುವ ಮೂಲಕ ಶಿಬಿರ ನಡೆಸಿದರು.
ಅ.1ರಂದು ಸಂಘದ ಜಿಲ್ಲಾಧ್ಯಕ್ಷ ಕೆ.ಜಯರಾಮ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಅನುರಾ ವಠಾರದಲ್ಲಿ ನಡೆದ ಮಾಸಿಕೆ ಸಭೆಯ ಬಳಿಕ ರಕ್ತದಾನ ರೋಟರಿ ಬ್ಲಡ್ ಬ್ಯಾಂಕ್ ಮೂಲಕ ಶಿಬಿರ ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಮುಕ್ವೆ, ಕೋಶಾಧಿಕಾರಿ ಕೇಸರಿ ಕೊಪ್ಪಳ, ಉಪಾಧ್ಯಕ್ಷ ಈಶ್ವರ ನಾಯ್ಕ, ಜೊತೆ ಕಾರ್ಯದರ್ಶಿ ಚೆನ್ನಪ್ಪ ಮಚ್ಚಿಮಲೆ ಉಪಸ್ಥಿತರಿದ್ದರು. ರಕ್ತದಾನ ಶಿಬಿರದ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ನಾಗ ಸನ್ನಿಧಿ, ನವಗ್ರಹ ಗುಡಿ, ಅಯ್ಯಪ್ಪ ಗುಡಿಯ ಬಳಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಜಗದೀಶ್ ಸ್ವಾಗತಿಸಿ, ರಾಜೇಶ್ ಮುಕ್ವೆ ವಂದಿಸಿದರು.

LEAVE A REPLY

Please enter your comment!
Please enter your name here