ಉಪ್ಪಿನಂಗಡಿಯಲ್ಲಿ ಸ್ವಚ್ಛತಾ ಶ್ರಮದಾನ

0

ಉಪ್ಪಿನಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಪ್ರಯುಕ್ತ ನಡೆಸಲಾಗುತ್ತಿರುವ ಸೇವಾ ಪಾಕ್ಷಿಕ ಸ್ವಚ್ಚತಾ ಸಪ್ತಾಹದ ಅಂಗವಾಗಿ ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಮಾಜಿ ಶಾಸಕ ಸಂಜೀವ ಮಟಂದೂರು ನೇತೃತ್ವದಲ್ಲಿ ಉಪ್ಪಿನಂಗಡಿಯ ಪ್ರಮುಖ ಬೀದಿಗಳಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲದ ಪ್ರಮುಖರಾದ ನಿತೇಶ್ ಶಾಂತಿವನ, ಸುರೇಶ್ ಅತ್ರಮಜಲು, ಕಂಗ್ವೆ ವಿಶ್ವನಾಥ ಶೆಟ್ಟಿ, ರಾಮಚಂದ್ರ ಮಣಿಯಾಣಿ, ನಿತಿನ್ ತಾರಿತ್ತಡಿ, ಮುಕುಂದ ಬಜತ್ತೂರು, ಸದಾನಂದ, ಉಷಾ ಮುಳಿಯ, ಲೋಕೇಶ್ ಬೆತ್ತೋಡಿ, ಲಕ್ಷ್ಮಣ್ ಬೆಳ್ಳಿಪ್ಪಾಡಿ, ಗಂಗಾಧರ ಪಿ.ಎನ್., ಸದಾನಂದ ಶೆಟ್ಟಿ, ಸುಜಾತ ರೈ, ಹರೀಶ್ ದರ್ಬೆ, ರಾಮಚಂದ್ರ ಪೂಜಾರಿ, ಆನಂದ ಕುಂಟಿನಿ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ, ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here