ರಾಮಕುಂಜ ಪ.ಪೂ.ಕಾಲೇಜು, ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿ ಆಚರಣೆ ನಡೆಯಿತು.


ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಬಲ್ಯರವರು ಮಾತನಾಡಿ, ಅ.2ರಂದು ಇಬ್ಬರು ಮಹಾತ್ಮರ ಜನ್ಮದಿನವನ್ನು ಆಚರಿತ್ತಿದ್ದೇವೆ. ಇಬ್ಬರೂ ಮಹತ್ತರ ಕೆಲಸಗಳನ್ನು ಮಾಡಿದ ಕಾರಣ ಆ ಆತ್ಮವನ್ನು ಮಹಾತ್ಮರನ್ನಾಗಿ ನಾವು ಕಾಣುತ್ತೇವೆ. ಮಹಾತ್ಮ ಗಾಂಧೀಜಿಯವರು ಅನೇಕ ಕಷ್ಟಗಳನ್ನ ಸಹಿಸಿಕೊಂಡು, ಬೇರೆ ಬೇರೆ ರಾಷ್ಟ್ರಗಳಲ್ಲಿ ಆದಂತಹ ಅನೇಕ ಅನುಭವಗಳ ಆಧಾರದ ಮೇಲೆ ನಮ್ಮ ರಾಷ್ಟ್ರವನ್ನು ಕಟ್ಟುವಂತಹ ಅಪೂರ್ವವಾದ ಕೆಲಸವನ್ನು ಮಾಡಿದ್ದಾರೆ. ಮಹಾತ್ಮ ಗಾಂಧೀಜಿಯಂತೆ ಲಾಲ್ ಬಹದ್ದೂರ್ ಶಾಸ್ತ್ರಿ ಜಿಯವರು ಕೂಡ ಬಾಲ್ಯದಲ್ಲಿ ಬಹಳಷ್ಟು ಕಷ್ಟಗಳನ್ನ ಅನುಭವಿಸಿ, ಅದನ್ನ ಮೆಟ್ಟಿ ನಿಲ್ಲಬೇಕು ಎಂಬುವಂತಹ ದೃಢ ಸಂಕಲ್ಪವನ್ನು ಮಾಡಿ ಶ್ರಮಿಸಿದ ಕಾರಣದಿಂದಲೇ ಅವರು ಪ್ರಧಾನಮಂತ್ರಿ ಹುದ್ದೆಗೆ ಏರಿದರು. ಪ್ರಧಾನಮಂತ್ರಿಯ ಆದಮೇಲೆ ಕೂಡ ರಾಷ್ಟ್ರದ ಕುರಿತಾಗಿ, ರಾಷ್ಟ್ರದ ಅಭಿವೃದ್ಧಿಯ ಕುರಿತಾಗಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡರು. ಜೈ ಜವಾನ್ ಜೈ ಕಿಸಾನ್ ಎಂಬ ಅವರ ಘೋಷವಾಕ್ಯ ಬಹಳಷ್ಟು ಪ್ರಸಿದ್ಧವಾಗಿದೆ. ಸಂವಿಧಾನದ ರಚನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ಅಂಬೇಡ್ಕರ್ ಜೀ ಅವರನ್ನು ಕೂಡ ಸ್ಮರಿಸುವಂತಹ ಕೆಲಸವನ್ನು ನಾವು ಇವತ್ತು ಮಾಡಬೇಕು” ಎಂದು ಹೇಳಿದರು.


ಈ ಸಂದರ್ಭದಲ್ಲಿ ಪ್ರೌಢಶಾಲೆಯ ಶಿಕ್ಷಕ ದಿನೇಶ್‌ರವರು ಸಂವಿಧಾನದ ಪೀಠಿಕೆಯನ್ನು ಓದಿದರು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಪ್ರೌಢಶಾಲೆಯ ಮುಖ್ಯಗುರು ಸತೀಶ್ ಭಟ್ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ.ವಂದಿಸಿದರು. ವಿದ್ಯಾರ್ಥಿನಿಯರಾದ ಅನುಶ್ರೀ ಉಡುಪ ಮತ್ತು ಶ್ರೇಯ ಪ್ರಾರ್ಥಿಸಿದರು. ಉಪನ್ಯಾಸಕ ಚೇತನ್ ಎಂ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here