ಬಿಳಿನೆಲೆ ಗ್ರಾ.ಪಂನಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹೂದ್ದೂರು ಶಾಸ್ತ್ರಿ ಜನ್ಮದಿನಾಚರಣೆ-ಸ್ವಚ್ಛತಾ ಕಾರ್ಯಕ್ರಮ

0

ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹೂದ್ದೂರು ಶಾಸ್ತ್ರಿಯವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಶಾರದಾ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಗಾಂಧೀಜಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗ್ರಾ.ಪಂ ಉಪಾಧ್ಯಕ್ಷ ಶಿವಶಂಕರ್ ಕೆ ಹಾಗೂ ಸದಸ್ಯರು ಭಾಗವಹಿಸಿದ್ದರು. ನಂತರ ಬಿಳಿನೆಲೆ ಗ್ರಾಮದ ನೆಟ್ಟಣದಿಂದ ಕೈಕಂಬದವರೆಗೆ ವಿವಿಧ ಕಡೆಗಳಲ್ಲಿ ಸ್ವಚ್ಚತೆ ಮಾಡಲಾಯಿತು. ಗ್ರಾಮದ ಆರೋಗ್ಯ ಸಹಾಯಕಿಯರು, ಸಿಎಚ್‌ಓ, ಆಶಾಕಾರ್ಯಕರ್ತೆಯರು, ಯುವಕ ಮಂಡಲ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೀನ ಹಾಗೂ ಪಂಚಾಯತ್ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here