ಮಂಗಳೂರು ತಾ| ಚು.ಸಾ.ಪ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆ

0

ಪುತ್ತೂರು: ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಅಧ್ಯಕ್ಷರಾಗಿ ಕವಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಸೆ.30ರಂದು ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಆಯ್ಕೆ ನಡೆಯಿತು. ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟುರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ನಿರ್ಗಮನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಶಾಲು ಪುಷ್ಪ ನೀಡಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಕವಿ, ಮಂಗಳೂರು ಚುಸಾಪದ ಮಾಜಿ ಅಧ್ಯಕ್ಷ ರಘು ಇಡ್ಕಿದು, ಕೋಶಾಧಿಕಾರಿ ಲತೀಶ್ ಸಂಕೊಳಿಗೆ, ಕವಯತ್ರಿ ಸೌಮ್ಯ ಗೋಪಾಲ್, ದಿಶಾ ಸಿ.ಜಿ ಉಪಸ್ಥಿತರಿದ್ದರು. ಪುತ್ತೂರಿನ ಬೊಳುವಾರು ನಿವಾಸಿಯಾದ ಗೋಪಾಲಕೃಷ್ಣ ಶಾಸ್ತ್ರಿಯವರು ಮಂಗಳೂರಿನಲ್ಲಿ ಉದ್ಯಮಿಯಾಗಿದ್ದಾರೆ.

LEAVE A REPLY

Please enter your comment!
Please enter your name here