ಕೆಮ್ಮಾರ: ಬೈಕ್ ಡಿಕ್ಕಿ-ಪಾದಚಾರಿಗೆ ಗಾಯ

0

ಪುತ್ತೂರು: ಬೈಕ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೆ.29ರಂದು ಸಂಜೆ ನಡೆದಿದೆ.


ಹಿರೇಬಂಡಾಡಿ ಗ್ರಾಮದ ಕೆಮ್ಮಾರಗುತ್ತು ಮನೆ ಸದಾನಂದ ಶೆಟ್ಟಿ(60ವ.)ಗಾಯಗೊಂಡವರಾಗಿದ್ದಾರೆ. ಸದಾನಂದ ಶೆಟ್ಟಿಯವರು ಕೆಮ್ಮಾರ ಮಸೀದಿ ಕಡೆಯಿಂದ ಕೆಮ್ಮಾರಗುತ್ತು ಕಡೆಗೆ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸೋನು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್(ಕೆಎ 19, 1315) ಡಿಕ್ಕಿಯಾಗಿದೆ. ಘಟನೆಯಲ್ಲಿ ಸದಾನಂದ ಶೆಟ್ಟಿ, ಬೈಕ್ ಸವಾರ ಸೋನು ಹಾಗೂ ಸಹ ಸವಾರ ಅನ್ವರ್‌ರವರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ಪೈಕಿ ಗಾಯಗೊಂಡಿರುವ ಸದಾನಂದ ಶೆಟ್ಟಿಯವರು ಚಿಕಿತ್ಸೆಗಾಗಿ ಪುತ್ತೂರಿನ ಹಿತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಮತ್ತು ಸಹಸವಾರನಿಗೂ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳು ಸದಾನಂದ ಶೆಟ್ಟಿಯವರು ನೀಡಿದ ದೂರಿನಂತೆ ಪುತ್ತೂರು ಸಂಚಾರ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here