ಶಿರಾಡಿ: ಬೈಕ್ ಕಾರು ಡಿಕ್ಕಿ-ಸವಾರನಿಗೆ ಗಾಯ

0

ನೆಲ್ಯಾಡಿ: ಬೈಕ್ ಹಾಗೂ ಕಾರು ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಅ.2ರಂದು ನಡೆದಿದೆ.


ಗಾಯಾಳು ಬೈಕ್ ಸವಾರನನ್ನು ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಾಮಗಾರಿ ಸಿಬ್ಬಂದಿ ಎಂದು ಹೇಳಲಾಗಿದೆ. ಡಿಕ್ಕಿಯಾದ ಕಾರು ಬಿಹಾರ ಮೂಲದವರದ್ದಾಗಿದ್ದು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಹೆಡ್ ಕಾನ್‌ಸ್ಟೇಬಲ್ ಕುಶಾಲಪ್ಪ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here