ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಪುತ್ತೂರ್ದ ಮುತ್ತು, ವಿ-ಕೇರ್ ಲ್ಯಾಬೋರೇಟರೀಸ್ ನಿಂದ ಉಚಿತ ಮಧುಮೇಹ, ರಕ್ತದೊತ್ತಡ ಶಿಬಿರ

0

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಮತ್ತು ಲಿಯೋ ಕ್ಲಬ್ ಪುತ್ತೂರ್ದ ಮುತ್ತು, ವಿ ಕೇರ್ ಲ್ಯಾಬೋರೇಟರೀಸ್ ಕಲ್ಲಾರೆ ಪುತ್ತೂರು ಇವರ ಸಹಯೋಗದೊಂದಿಗೆ ಸಾರ್ವ ಜನಿಕ ಶ್ರೀ ಮಹಾ ಗಣೇಶೋತ್ಸವ ಸಮಿತಿ ಕಿಲ್ಲೆ ಮೈದಾನ ಪುತ್ತೂರು ಇವರ ಸಹಕಾರದೊಂದಿಗೆ ಸೆ.20 ಮತ್ತು 21ರಂದು ಕಿಲ್ಲೆ ಮೈದಾನದಲ್ಲಿ ಉಚಿತ ಮಧುಮೇಹ ಮತ್ತು ರಕ್ತ ದೊತ್ತಡ ಶಿಬಿರ ನಡೆಯಿತು. ಶಿಬಿರವನ್ನು ಉದ್ಯಮಿ ಅಭಿಷೇಕ್ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಸುಮಾರು 200 ಜನರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆಗೆ ಒಳಗಾದರು. ಅತಿಥಿಗಳಾಗಿ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ದಿನೇಶ್ ಪಿ.ವಿ, ಮತ್ತು ವಿ- ಕೇರ್ ಲ್ಯಾಬೋರೇಟರೀಸ್ ನ ಪಾಲುದಾರರಾದ ಸುದೇಶ್, ಮತ್ತು ಸಿಬ್ಬಂದಿಗಳು, ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಲಯನ್ಸ್ ಮತ್ತು ಲಿಯೋ ಕ್ಲಬ್ಬಿನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷ ರವೀಂದ್ರ ಪೈಯವರು ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ವೇದಾವತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here