ಕಡಬ: ಮೂರಾಜೆ ಕೊಪ್ಪ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ-ಸ್ವಚ್ಚತಾ ಕಾರ್ಯಕ್ರಮ

0

ಕಡಬ: ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳು ಮತ್ತು ಅಂಗನವಾಡಿ ಮಕ್ಕಳ ಜತೆಗೊಡಿ 154ನೇ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಗಾಂಧೀಜಿಯವರನ್ನು ಸ್ಮರಣಿಸಲಾಯಿತು. ಶಿಕ್ಷಕಿ ಹೇಮಲತಾ ಗಾಂಧೀಜಿಯವರ ಹೋರಾಟ ಹಾಗೂ ಬದುಕಿನ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ವಿದ್ಯಾಧಿಮಾನಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲೆ ಹಾಗೂ ಅಂಗನವಾಡಿಯ ಸುತ್ತಮುತ್ತ ಸ್ವಚ್ಛತೆಗೊಳಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಆಶಾ ವಂದಿಸಿದರು.

LEAVE A REPLY

Please enter your comment!
Please enter your name here