ಕೆದಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ

0

ವಿಟ್ಲ: ಗಾಂಧಿ ಜಯಂತಿ ಅಂಗವಾಗಿ ಕೆದಿಲ ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಪಂಚಾಯತ್‌ ಅಧ್ಯಕ್ಷರಾದ ಹರೀಶ.ವಿ. ರವರು ಗಾಂಧೀಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ಪಂಚಾಯತ್‌ ಉಪಾಧ್ಯಕ್ಷರಾದ ಬೀಪಾತುಮ್ಮ, ಸದಸ್ಯರಾದ ಸುಲೈಮಾನ್‌ ಸರೋಳಿ, ಹರಿಣಾಕ್ಷಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು, ಸಂಜೀವಿನಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಪಂಚಾಯತ್‌ ಸಿಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಅಜಿತ್ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ ವಂದಿಸಿದರು. ಬಳಿಕ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here