ಗ್ರಾಪಂ ಅಧ್ಯಕ್ಷರ ಕಡೆಗಣನೆ ವಿಚಾರ – ಬೊಳಿಕ್ಕಳ ಶಾಲಾ ವಿವೇಕ ಕೊಠಡಿ ಕಾರ್ಯಕ್ರಮ ಮುಂದೂಡಿಕೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ಅ.3ರಂದು ನಡೆಯಬೇಕಿದ್ದ ಕೆಯ್ಯೂರು ಗ್ರಾಮದ ಬೊಳಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮುದ್ರಿಸುವಾಗ ಸರಕಾರಿ ಪ್ರೋಟೋಕಾಲ್ ಅನ್ನು ಪರಿಗಣಿಸದೇ ಕೆಯ್ಯೂರು ಗ್ರಾಪಂ ಅಧ್ಯಕ್ಷರ ಹೆಸರನ್ನು ಕೈಬಿಡುವ ಮೂಲಕ ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಜಿಲ್ಲಾಧಿಕಾರಿ ಹಾಗೂ ಬಿಇಒರವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here