ನೆಲ್ಯಾಡಿ: ಪಾರ್ಶ್ವವಾಯು ಪೀಡಿತ ವ್ಯಕ್ತಿ ಆತ್ಮಹತ್ಯೆ

0

ನೆಲ್ಯಾಡಿ: ಪಾರ್ಶ್ವವಾಯು ಪೀಡಿತರಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯ ಮರಂಕೋಡಿ ಎಂಬಲ್ಲಿ ಅ.3ರಂದು ನಡೆದಿದೆ.
ನೆಲ್ಯಾಡಿ ಗ್ರಾಮದ ಮರಂಕೋಡಿ ನಿವಾಸಿ ಚನಮು(58ವ.)ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಚನಮು ಅವರು ಕೂಲಿ ಕೆಲಸ ಮಾಡಿಕೊಂಡಿದ್ದು ಕಳೆದ 3 ವರ್ಷಗಳಿಂದ ಪಾರ್ಶ್ವವಾಯು ಖಾಯಿಲೆ ಪೀಡಿತರಾಗಿದ್ದು ಔಷಧಿ ಕೊಡಿಸಿದರೂ ಗುಣಮುಖವಾಗದೇ ಇದ್ದು ಇದೇ ವಿಚಾರದಲ್ಲಿ ಅವರು ಮಾನಸಿಕವಾಗಿ ನೊಂದಿದ್ದರು. ಇದೇ ಕಾರಣದಿಂದ ಅ.3ರಂದು ಮಧ್ಯಾಹ್ನ ತನ್ನ ವಾಸ್ತವ್ಯದ ಮನೆಯ ಒಳಗಡೆ ನೈಲನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಚನಮು ಅವರ ಸಹೋದರ ಆನಂದ ಕೆ.ಪಿ.ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here