ಮರಾಟಿ ಸಮಾಜ ಸೇವಾ ಸಂಘದಲ್ಲಿ ಗಾಂಧೀ ಜಯಂತಿ

0

ಪುತ್ತೂರು: ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಇದರ ವತಿಯಿಂದ ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮ ಆಚರಿಸಿದರು.
ಸಂಘದ ಮಾಜಿ ಅಧ್ಯಕ್ಷ ಯು.ಕೆ ನಾಯ್ಕ ರವರು ಗಾಂಧಿಜಿಯವರ ಭಾವಚಿತ್ರಕ್ಕೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ದುಗ್ಗಪ್ಪ ನಾಯ್ಕ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಬಗ್ಗೆ ಗುಣಗಾನ ಮಾಡಿದರು. ಸದಸ್ಯರಾದ ಶೀನ ನಾಯ್ಕ ಗಣೇಶಭಾಗ್, ಲಲಿತಾ ಅಶೋಕ್ ರವರು ಗಾಂಧಿ ಜಯಂತಿಯ ಕುರಿತು ಮಾತನಾಡಿದರು.
ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಎನ್ ಎಸ್, ಕಾರ್ಯದರ್ಶಿ ಅಶೋಕ್ ಕುಮಾರ್ ಬಲ್ನಾಡ್, ಖಜಾಂಚಿ ಬಾಬು ನಾಯ್ಕ ತೆಂಕಿಲ, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here