ಬಂಬಿಲ : ಶ್ರೀ ಮಹಮ್ಮಾಯಿ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ – ಸಂಸದರ ಜತೆ ಮಾತುಕತೆ

0

ಸವಣೂರು : ಪಾಲ್ತಾಡಿ ಗ್ರಾಮದ ಬಂಬಿಲ ಶ್ರೀ ಮಹಮ್ಮಾಯಿ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರದ ಸಲುವಾಗಿ, ದೇವಾಲಯಕ್ಕೆ ಸಂಬಂಧಿಸಿದ ಶಿಲ್ಪಿಗಳು ತಯಾರಿಸಿದ ನೀಲನಕ್ಷೆಗೆ ಅನುಗುಣವಾಗಿ ನಿರ್ಮಾಣ‌ ಕಾರ್ಯ ಕುರಿತಾಗಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಲೋಕಸಭಾ ಸದಸ್ಯರು, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಜೀರ್ಣೋದ್ಧಾರ ಸಮಿತಿಯ ಕಾರ್ಯಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಆಡಳಿತ ಸಮಿತಿಯ ಅಧ್ಯಕ್ಷ ಕುಶಲಪ್ಪ ಬಿಎಂ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಶಶಿಕುಮಾರ್ ಬಿ ಎನ್, ಜೊತೆ ಕಾರ್ಯದರ್ಶಿ ಕೃಷ್ಣಪ್ಪ ಬಂಬಿಲ, ಸಲಹೆಗಾರ ವಸಂತ ನಡುಬೈಲು ಅವರು ಉಪಸ್ಥಿತರಿದ್ದು ಮುಂದಿನ ಕೆಲಸ ಕಾರ್ಯಗಳ ಕುರಿತು ಸಂಸದರ ಜೊತೆ ಮಾತುಕತೆ ನಡೆಸಿದರು.

LEAVE A REPLY

Please enter your comment!
Please enter your name here