ಕಾಣಿಯೂರು: ಆಧಾರ್ ಕಾರ್ಡ್ ತಿದ್ದುಪಡಿ, ನೋಂದಣಿ ಶಿಬಿರ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ವತಿಯಿಂದ
ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ನೋಂದಣಿ ಶಿಬಿರವು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಣಿಯೂರು ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಕಾಣಿಯೂರು ಶಾಖೆಯ ಪ್ರಬಂಧಕ ಅಥಿತ್ ರೈ ಉದ್ಘಾಟಿಸಿ ಶುಭಹಾರೈಸಿದರು. ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ ಅಧ್ಯಕ್ಷತೆ ವಹಿಸಿದ್ದರು. ಅದ್ವಿಕಾ ಎಂಟರ್ ಪ್ರೈಸಸ್ ನ ವಿಜೇತ್ ಮುಂಡಾಲ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ ಉಪಸ್ಥಿತರಿದ್ದರು. ಯುವಕ ಮಂಡಲದ ಧರ್ಮಪಾಲ ಕಲ್ಪಡ, ಪುನೀತ್ ಕಲ್ಪಡ, ಉಮೇಶ್ ಬಂಡಾಜೆ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ಯುವಕ ಮಂಡಲದ ಕಾರ್ಯದರ್ಶಿ ದೀಕ್ಷಿತ್ ಕಂಪ ಸ್ವಾಗತಿಸಿ, ವಸಂತ್ ಪೆರ್ಲೋಡಿ ವಂದಿಸಿದರು. ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.
ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಅ.5 ಮತ್ತು ಅ.6ರಂದು ನಡೆಯಲಿದ್ದು, ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಯುವಕ ಮಂಡಲದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here