ಕೊಕ್ಕಡ ಜೇಸಿ: ವಲಯಾಧ್ಯಕ್ಷರ ಭೇಟಿ-ಘಟಕದ ವೈಬ್ ಸೈಟ್ ಲೋಕಾರ್ಪಣೆ

0

ನೆಲ್ಯಾಡಿ: ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಹದಿನೈದರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅ.4ರಂದು ಭೇಟಿ ನೀಡಿದರು.

ಸಂತ ಜಾನರ ಶಾಲಾ ಸಭಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಘಟಕದ ಅಧಿಕೃತ ವೈಬ್ ಸೈಟ್ https://www.jcikokkadakapila.com ಹಾಗೂ ಆಂಡ್ರಾಯ್ಡ್ ಆ್ಯಪ್
ಲೋಕಾರ್ಪಣೆ ಮಾಡಿದರು.ಬಳಿಕ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಜೇಸಿ ಸಂಸ್ಥೆಯು ಉತ್ತಮ ಕಾರ್ಯಕ್ರಮ ಮೂಲಕ ಜನಸೇವೆ ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಶಾಲಾಕ್ಷಿ, ವಿಲ್ಮಾ ಶ್ವೇತಾ ಸ್ಟ್ರೆಲ್ಲಾ, ಯು. ನರಸಿಂಹ ನಾಯಕ್, ಕೆ. ವಸಂತ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ವಲಯಾಧ್ಯಕ್ಷ ಹಾಗೂ ಅವರ ಧರ್ಮಪತ್ನಿಯನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ ರಾವ್ ,ವಲಯಾಧ್ಯಕ್ಷ ಆಪ್ತ ಕಾರ್ಯದರ್ಶಿ ಕಾರ್ತಿಕ್ ಬಿ.ಜೋಸೆಫ್ ಪಿರೇರಾ,ಪ್ರಕಾಶ್ ಬೊತೆಲ್ಲೋ ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ,ಜೆಸಿಂತಾ ಡಿ ಸೋಜ,ರಾಜಾರಾಮ, ಜಸ್ವಂತ್ ಪಿರೇರಾ, ಪ್ರಿಯಾ, ದೀಪಾ, ಜೋಯ್ ಬೊತೆಲ್ಲೋ ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಕ್ಟರ್ ವಂದಿಸಿದರು.

LEAVE A REPLY

Please enter your comment!
Please enter your name here