ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಪ್ರತಿನಿಧಿಸಿದ ತ್ರೋಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ರಾಮಮೂರ್ತಿ ನಗರ ಬೆಂಗಳೂರಿನಲ್ಲಿ ಇದೇ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರಂದು ನಡೆದ ರಾಜ್ಯ ಮಟ್ಟದ ಬಾಲವರ್ಗದ ತ್ರೋಬಾಲ್ ಪಂದ್ಯಾಟದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದೊಂದಿಗೆ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 8ನೇ ತರಗತಿ ವಿದ್ಯಾರ್ಥಿ ಸಮೃದ್ಧ್ ರೈ (ಡಾ.ನಿರಂಜನ್ ರೈ ಹಾಗೂ ಡಾ.ಸುಪ್ರೀತಾ ರೈ ದಂಪತಿ ಪುತ್ರ) ಇವರು ಪ್ರತಿನಿಧಿಸಿ ಭಾಗವಹಿಸಿದ ತಂಡವು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಕಿಶೋರ ವರ್ಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಾದ 9ನೇ ತರಗತಿಯ ಶ್ರೀಲಕ್ಷ್ಮಿ ಹಾಗೂ ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ ಭಾಗವಹಿಸಿದ ಪೂರ್ವಿ ಬಿ. ಕೆ. ಇವರ ತಂಡಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿವೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here