ಅಗ್ನಿವೀರ್‌ಗೆ ಸೇರ್ಪಡೆಯಾದ ಹಿರಿಯ ವಿದ್ಯಾರ್ಥಿ ಭವಿಷ್‌ಗೆ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ, ಭಾರತೀಯ ಸೇನೆಯಲ್ಲಿ ಅಗ್ನಿವೀರ್‌ಗೆ ಸೇರ್ಪಡೆಯಾದ ಸಂಸ್ಥೆಯ ಹಳೆಯ ವಿದ್ಯಾರ್ಥಿ ಭವಿಷ್‌ರವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್.ಪಿ.ವಿ ಭವಿಷ್‌ರವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ವಿದ್ಯಾರ್ಥಿ ಭವಿಷ್ ಮಾತನಾಡುತ್ತಾ ತಾನು ಅಗ್ನಿವೀರ್‌ಗೆ ಆಯ್ಕೆಯಾದ ಬಗ್ಗೆ ಹಾಗೂ ತನ್ನ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.ನಮ್ಮ ಜೀವನದಲ್ಲಿ ಗುರಿ ಇರಬೇಕು ಹಾಗೂ ಅದನ್ನು ಸಾಧಿಸುವ ಛಲವೂ ಇರಬೇಕು ಎಂದು ಹೇಳುತ್ತಾ ತನ್ನನ್ನು ಗೌರವಿಸಿದ ಸಂಸ್ಥೆಯ ಸಂಚಾಲಕರಿಗೆ ಹಾಗೂ ಪ್ರಾಂಶುಪಾಲರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಹೇಮಲತಾ ಗೋಕುಲ್‌ನಾಥ್,ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ.ಎನ್.ಡಿ, ಉಪನ್ಯಾಸಕ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here