ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಡಬ ತಾಲೂಕು ಘಟಕ ಮತ್ತು ಸ. ಉ. ಹಿ. ಪ್ರಾ.ಶಾಲೆ ಕೊಯಿಲ ಇವರ ಆಶ್ರಯದಲ್ಲಿ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯ ಜಾಗೃತಿ ಕಾರ್ಯಕ್ರಮ ಅ.6 ರಂದು ಕೊಯಿಲ ಶಾಲಾ ಸಭಾಂಗಣದಲ್ಲಿ ಜರಗಿತು.
ಕ. ಸಾ. ಪ. ಕಡಬ ತಾಲೂಕು ಘಟಕ ಅಧ್ಯಕ್ಷ ಕೆ.ಸೇಸಪ್ಪ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್. ಡಿ ಯಂ. ಸಿ. ಅಧ್ಯಕ್ಷ ವಿಶ್ವನಾಥ ಗೌಡ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ.ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುಜಾತ ಯಂ., ಕ. ಸಾ.ಪ. ಸದಸ್ಯ ಕಿಶೋರ್ ಕುಮಾರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸ್ವಾಗತಿಸಿದರು.ಸ್ಪಷ್ಟ ಓದು, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಸಾಪ ವತಿಯಿಂದ ಬಹುಮಾನ ವಿತರಿಸಲಾಯಿತು. ಸಹಶಿಕ್ಷಕಿ ಅನುಪಮ ಕೆ ಎನ್ . ವಂದಿಸಿದರು. .ಶಿಕ್ಷಕಿ ರೇಖಾ ಪಿ. ನಿರೂಪಣೆಗೈದರು .