ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪ-ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು.

0

ಪುತ್ತೂರು:ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭ ನಡೆದ ಕಲ್ಲುತೂರಾಟದಿಂದ ಮನೆಗಳಿಗೆ ಹಾನಿಯಾಗಿರುವ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಸ್ಥಳೀಯ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲುತೂರಾಟದಿಂದ ಮನೆಗೆ ಹಾನಿಯಾಗಿ ಸಂತ್ರಸ್ತರಾಗಿದ್ದವರ ಭೇಟಿ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 153 ಎ ಅಡಿಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here