ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಶೌರ್ಯ ಜಾಗರಣ ರಥ

0

ಸುಬ್ರಹ್ಮಣ್ಯ: ವಿಶ್ವ ಹಿಂದೂ ಪರಿಷತ್ ಭಜರಂಗದಳದ 60ನೇ ವರ್ಷಾಚರಣೆಯ ಅಂಗವಾಗಿ ರಾಜ್ಯಾದಾದ್ಯಂತ ಸಂಚರಿಸುವ ಶೌರ್ಯ ಜಾಗರಣ ರಥವು ಅ.7ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪುರ ಪ್ರವೇಶ ಮಾಡಿತು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಭಾರತಮಾತೆಗೆ ಮಂಗಳ ವಾದ್ಯಗಳೊಂದಿಗೆ ಪೂಜೆ ಸಲ್ಲಿಸಲಾಯಿತು ಮತ್ತು ದೇವಾಲಯದ ಆನೆ ಯಶಸ್ವಿ ಹೂವಿನ ಮಾಲೆಯಿಂದ ಗೌರವ ಅರ್ಪಣೆ ಮಾಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ‌ ಮೋಹನ್ ರಾಂ ಸುಳ್ಳಿ ಹಾಗೂ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here