ಮದ್ರಸ ವಿದ್ಯಾರ್ಥಿಯ ಮೇಲೆ ಹಲ್ಲೆ: ದೂರು ದಾಖಲು

0

ಉಪ್ಪಿನಂಗಡಿ: ನೆಲ್ಯಾಡಿಯ ಮದ್ರಸವೊಂದರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದನ್ವಯ ನ್ಯಾಯಲಯದ ನಿರ್ದೇಶನದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಜಿ.ಎಚ್. ಮುಹಮ್ಮದ್ ಸುಹೈಲ್ ಎಂಬ 19ರ ಹರೆಯದ ವಿದ್ಯಾರ್ಥಿಯ ಮೇಲೆ ಕಳೆದ ಸೆ. 28ರಂದು ಉಮ್ಮರಬ್ಬ (65), ಉಸ್ಮಾನ್ (25), ಅಬ್ದುಲ್ಲಾ (35) , ರಫೀಕ್(35) , ಶಕೀರ್(35), ಶಕಿಲ್(30) ಎಂಬವರು ನೆಲ್ಯಾಡಿ ಮಸೀದಿಯ ಮದ್ರಸ ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆಂದೂ, ಹಲ್ಲೆಗೊಳಗಾದವ ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿರುವೆನೆಂದು ಆರೋಪಿಸಿ ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿತ್ತು. ಈ ಬಗ್ಗೆ ನ್ಯಾಯಾಲಯವು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಉಪ್ಪಿನಂಗಡಿ ಪೊಲೀಸರಿಗೆ ನಿರ್ದೇಶನವನ್ನು ನೀಡಿತ್ತು.
ಅದರಂತೆ ಶನಿವಾರದಂದು ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here