5 ತಿಂಗಳು ಹಿಂದಿನ ಬನ್ನೂರು ಆನೆಮಜಲು ಕಳ್ಳತನ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ

0

ಪುತ್ತೂರು: 5 ತಿಂಗಳ ಹಿಂದೆ ಬನ್ನೂರು ಆನೆಮಜಲು ಎಂಬಲ್ಲಿ ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿಂದೆ.
ಬನ್ನೂರು ಆನೆಮಜಲು ನಿವಾಸಿ ಮೌನಿಶ್ ಎಂಬವರ ಮನೆಯಿಂದ ಮೇ.29ರಂದು ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಕಳವಿಗೆ ಸಂಬಂಧಿಸಿ ಪುತ್ತೂರು ಪೊಲೀಸರು ತನಿಖೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದರು. ಆತನ ವಿಚಾರಣೆ ವೇಳೆ ಇನ್ನೋರ್ವ ಆರೋಪಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿಯಂತೆ ಇನ್ನೋರ್ವ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here