ಎತ್ತರಜಿಗಿತ: ನೆಲ್ಯಾಡಿಯ ಆದರ್ಶ್ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಅಮೆಚೂರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆದರ್ಶ್ ಶೆಟ್ಟಿಯವರು ಎತ್ತರಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಇವರು ಅ.15ರಿಂದ 17ರ ತನಕ ತೆಲಂಗಾಣದ ವಯಂಗಾಳ್‌ನಲ್ಲಿ ನಡೆಯುವ ರಾಷ್ಟ್ರಮಟ್ಟದ ಅಮೆಚೂರ್ ಮೀಟ್‌ಗೆ ಆಯ್ಕೆಯಾಗಿದ್ದಾರೆ. ಇವರು ದೈಹಿಕ ಶಿಕ್ಷಣ ಶಿಕ್ಷಕರಾದ ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪ್ರಮುಖ ತರಬೇತುದಾರರಾದ ಪುಷ್ಪರಾಜ್‌ರವರಿಂದ ತರಬೇತಿ ಪಡೆದುಕೊಂಡಿದ್ದಾರೆ. ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಹಳೆವಿದ್ಯಾರ್ಥಿಯಾದ ಇವರು ನೆಲ್ಯಾಡಿ ಅಶ್ವಮೇಥ ಕ್ಯಾಟರರ‍್ಸ್ ಮಾಲಕ ರತ್ನಾಕರ ಶೆಟ್ಟಿ ಹಾಗೂ ಹೇಮಲತಾ ದಂಪತಿ ಪುತ್ರ.

LEAVE A REPLY

Please enter your comment!
Please enter your name here