ಮಾಜಿ ಪ್ರಧಾನಿ ದೇವೇಗೌಡರಿಂದ ಸುಬ್ರಹ್ಮಣ್ಯದಲ್ಲಿ ವಿಶೇಷ ಸೇವೆ

0

ಕಡಬ: ಮಾಜಿ ಪ್ರಧಾನಿ ,ರಾಜ್ಯ ಸಭಾ ಸದಸ್ಯ ಹೆಚ್‌.ಡಿ.ದೇವೇಗೌಡ ಹಾಗೂ ಚೆನ್ನಮ್ಮ ದಂಪತಿ ಅ.9ರಂದು ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಸೇವೆ ಸಲ್ಲಿಸಿದರು.

ಹೆಚ್‌.ಡಿ.ದೇವೇಗೌಡ ದಂಪತಿ ಅ.8ರಂದು ಮಧ್ಯಾಹ್ನ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಅಗಮಿಸಿ ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ಮೈದಾನದ ಹೆಲಿಪ್ಯಾಡ್‌ನಲ್ಲಿ ಇಳಿದು ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲು ಸಿದ್ಧತೆ ಮಾಡಲಾಗಿತ್ತು. ಆದರೆ ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ಹೆಲಿಕಾಪ್ಟರ್ ಬರಲು ಅನಾನುಕೂಲ ಉಂಟಾದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಸುಬ್ರಹ್ಮಣ್ಯಕ್ಕೆ ಬಾರದೆ ಪುನಃ ಬೆಂಗಳೂರಿಗೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ದೇವೇಗೌಡ ದಂಪತಿ ಅ.8ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನ ಮೂಲಕ ಬಂದು ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.

ದೇವೇಗೌಡ ದಂಪತಿ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡಿ ಅ.9ರಂದು  ಪ್ರಾತಃ ಕಾಲ ವಿಶೇಷ ಸೇವೆ ನೆರವೇರಿಸಿದರು.ದೇವೇ ಗೌಡ ದಂಪತಿಗೆ ದೇವಳದ ಆನೆ ಯಶಸ್ವಿ ಆಶೀರ್ವದಿಸಿತು. ದೇವಸ್ಥಾನದ ಶಿಷ್ಟಾಚಾರ ವಿಭಾಗದಿಂದ ಮಾಜಿ ಪ್ರಧಾನಿ ದೇವೇ ಗೌಡ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here