ಕಾಂಗ್ರೆಸ್ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ,ಜೆಡಿಎಸ್ ಮೈತ್ರಿ ನಿರ್ಧಾರಕ್ಕೆ ಬಂದಿದ್ದೇವೆ..

0

ಕುಕ್ಕೇ ಸುಬ್ರಹ್ಮಣ್ಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಪುತ್ತೂರು: ದಕ್ಷಿಣ ಭಾರತದ ಹೆಸರಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಭೇಟಿ ನೀಡಿ, ಅ 9ರಂದು ಬೆಳಗ್ಗೆ 6:30ಕೆ ಆಶ್ಲೇಷ ಬಲಿ ಪೂಜೆ ನಡೆಸಿ, ಬೆಳಗ್ಗೆ 10:30ಕ್ಕೆ ತುಲಾ ಭಾರ ಸೇವೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.


ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಹಿತಿ ನೀಡಿದ ಮಾಜಿ ಪ್ರಧಾನಿ,ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಕುಮಾರಸ್ವಾಮಿಯವರು ಈಗಾಗಲೇ ಗೃಹಮಂತ್ರಿ ಜೊತೆ ಚರ್ಚೆ ನಡೆಸಿದ್ದಾರೆ.ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೇ.ದಸರಾ ಕಳೆದು ಸೀಟು ಹಂಚಿಕೆ ಚರ್ಚೆ ನಡೆಯಲಿದೆ. ನನ್ನ ಆರೋಗ್ಯ ಸುಧಾರಿಸಿದರೆ ನಾನು, ಇಲ್ಲಾ ಕುಮಾರಸ್ವಾಮಿ ಮತ್ತೆ ಗೃಹಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದೇವೆ. ಮೈತ್ರಿಗೆ ಮೊದಲು ಜೆಡಿಎಸ್ ನ 19 MLA, ,8 MlC ಪಕ್ಷದ ಅಧ್ಯಕ್ಷ ಸಿ.ಎಮ್. ಇಬ್ರಾಹಿಂ ಜೊತೆ ಎರಡು ಸುತ್ತು ಮಾತುಕತೆ ನಡೆಸಲಾಗಿದೆ.ಅದು ನಡೆದ ಬಳಿಕ ಕುಮಾರಸ್ವಾಮಿ ಗೃಹಮಂತ್ರಿಗಳ ಭೇಟಿ ಮಾಡಿದ್ದಾರೆ. ಹಿಂದಿನ ಚುನಾವಣೆಯ ಮತಗಳಿಕೆ ಒಟ್ಟು ಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ.ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ. ಉಳಿದೆಡೆ ಬಿಜೆಪಿನೇ ಇದೆ.ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ,ಜೆಡಿಎಸ್ ಒಂದುಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ.
ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ 30-33 ,ಕಾಂಗ್ರೆಸ್ 40, ಜೆಡಿಎಸ್ 20,22 ಸಿಕ್ಕಿದೆ. ಈ ಬಾರಿಗೆ ಯಾರಿಗೆ ಓಟ್ ಮಾಡಬೇಕು ಅನ್ನೋದನ್ನ ಮತದಾರ ತೀರ್ಮಾನ ಮಾಡ್ತಾನೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here