ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದ ಬೆಂಗಳೂರು ಕಂಬಳಕ್ಕೆ ಕರೆಪೂಜೆ

0

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ (ರಿ), ತುಳು ಕೂಟ ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸರ್ವ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೆಂಗಳೂರು ಕಂಬಳ ಸಮಿತಿ ಮೂಲಕ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕರೆಪೂಜೆ ನಡೆಯಿತು. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ‌ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ‌ ಅಶೋಕ್‌ ಕುಮಾರ್ ರೈ ಸೇರಿದಂತೆ ಗಣ್ಯರು ಕರೆಪೂಜೆ ನೆರವೇರಿಸಿದರು. ಪ್ರಮುಖರಾದ ಗುಣರಂಜನ್ ಶೆಟ್ಟಿ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಸ್ಥಳೀಯ ಶಾಸಕ ಹ್ಯಾರಿಸ್ ನಲಪಾಡ್, ಉದ್ಯಮಿ ಉಮರ್ ಟಿ.ಕೆ., ಗುರುಕಿರಣ್, ಕಂಬಳ ಸಮಿತಿ ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್ ಸಿ‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್, ಎಂಆರ್ ಜಿ ಗ್ರೂಪ್ ನ ಮಾಲಕ ಪ್ರಕಾಶ್ ಶೆಟ್ಟಿ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here