ನಾಳೆ(ಅ.13)-ಪೋಟೋಗ್ರಾಫರ್ ಎಸೋಸಿಯೇಶ್‌ನ ಪುತ್ತೂರು ವಲಯದ ಪದಾಧಿಕಾರಿಗಳ ಪದ ಪ್ರದಾನ

0

ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ -ಪೋಟೋಗ್ರಾಫರ್ ಎಸೋಸಿಯೇಶನ್ ನ ಪುತ್ತೂರು ವಲಯದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ಅ.13ರಂದು ಸಂಜೆ ಪಡೀಲು ಎಂಡಿಎಸ್ ಟ್ರೀನಿಟಿ ಹಾಲ್ ನಲ್ಲಿ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸೌತ್ ಕೆನರಾ ಪೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಾಯಕ ಆಯುಕ್ತ ಗಿರೀಶ್ ನಂದನ್, ಜೇಸಿಐ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕ್ಯಾಮರಾ ಸೆಂಟರ್ ಮಾಲಕ ಭರತ್ ಕುಮಾರ್, ಸೌತ್ ಕೆನರಾ -ಪೋಟೋಗ್ರಾಫರ್ಸ್ ಅಸೋಸಿಯೇಷನ್ ನ ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ,ಕೋಶಾಧಿಕಾರಿ ನವೀನ್ ರೈ ಪಂಜಳ, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಎನ್ ಬಂಟ್ವಾಳ, ನಿರ್ದೇಶಕ ಸುಧಾಕರ ಶೆಟ್ಟಿ, ಎಸ್.ಕೆ.ಪಿ.ಎ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ವಾಸುದೇವ ರಾವ್, ನಿರ್ದೇಶಕ ಸುದರ್ಶನ್ ರಾವ್, ಪುತ್ತೂರು ವಲಯದ ಗೌರವಾಧ್ಯಕ್ಷ ಹರೀಶ್ ಎಲಿಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ವಲಯದ ನೂತನ ಅಧ್ಯಕ್ಷರಾಗಿ ಕೋರ್ಟ್ ರಸ್ತೆಯ ಫೋಟೋಶಾಪ್ ನ ರಘು ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಉಪ್ಪಿನಂಗಡಿ ಪ್ರಸಾದ್ ಸ್ಟುಡಿಯೋದ ಚಂದ್ರಶೇಖರ್ ಶೆಟ್ಟಿ, ಖಜಾಂಜಿಯಾಗಿ ಕಲ್ಲಿಮಾರ್ ಫೋಟೋಟ್ರಿಕ್ಸ್‌ನ ಪ್ರಮೋದ್ ಸಾಲ್ಯಾನ್ ಹಾಗೂ ಗೌರವಾಧ್ಯಕ್ಷರಾಗಿ ಈಶ್ವರಮಂಗಲ ಜ್ಯೋತಿ ಸ್ಟುಡಿಯೋದ ಹರೀಶ್ ಎಲಿಯ, ಉಪಾಧ್ಯಕ್ಷರಾಗಿ ಗಣೇಶ್ ಕಟ್ಟಪುಣಿ, ವಸಂತ್ ಕಾಣಿಯೂರು, ಸಂಘಟನಾ ಕಾರ್ಯದರ್ಶಿಯಾಗಿ ರವಿಚಂದ್ರ, ಜೊತೆ ಕಾರ್ಯದರ್ಶಿಯಾಗಿ ಗಿರೀಶ್ ಕಲ್ಲೇರಿ, ಸುಪ್ರೀತ್, ವಿವಿಧ ವಿಭಾಗಗಳ ಕಾರ್ಯದರ್ಶಿಗಳು, ವಲಯ ನಿರ್ದೇಶಕರು ಹಾಗೂ ಜಿಲ್ಲಾ ನಿರ್ದೇಶಕರು ಪದ ಪ್ರದಾನ ಸ್ವೀಕರಿಸಲಿದ್ದಾರೆ ಎಂದು ಅಸೋಸಿಯೇಷನ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here