ಅ.14 ಮತ್ತು ಅ.15ರಂದು ಬೆಳ್ಳಾರೆ ಜ್ಞಾನದೀಪದಲ್ಲಿ ರಂಗ ಚಟುವಟಿಕೆ ಕಾರ್ಯಾಗಾರ

0

ಪುತ್ತೂರು: ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಶಿಕ್ಷಕರಿಗೆ ಎರಡು ದಿನಗಳ ರಂಗ ಚಟುವಟಿಕೆ ಕಾರ್ಯಾಗಾರ ಅ.14 ಶನಿವಾರ ಮತ್ತು ಅ.15 ಆದಿತ್ಯವಾರದಂದು ಬೆಳ್ಳಾರೆಯಲ್ಲಿ ನಡೆಯಲಿದೆ. ಚಲನಚಿತ್ರ ನಟ, ನಿರ್ದೇಶಕ ಮೋಹನ್ ಶೇಣಿ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ನಟ, ರಂಗ ನಿರ್ದೇಶಕ ಉದಯ ಸಾರಂಗ್ ಮತ್ತು ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ರಂಗಭೂಮಿಯ ವಿವಿಧ ಆಯಾಮಗಳ ಬಗ್ಗೆ ಶಿಕ್ಷಕಿಯರಿಗೆ ತರಬೇತಿ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here