ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ INSPIRE AWARD MANAK ಸ್ಪರ್ಧೆ- ವಿವೇಕಾನಂದ ಆ. ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿ ಪೃಥ್ವಿರಾಜ್ ಪ್ರಭು ಭಾಗಿ

0

ಪುತ್ತೂರು:ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಅ. 9ರಿಂದ 11ರ ವರೆಗೆ ನವದೆಹಲಿಯಲ್ಲಿ ನಡೆಸಿದ 2021-22ನೇ ಸಾಲಿನ INSPIRE AWARD MANAK ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿ ಪೃಥ್ವಿರಾಜ್ ಪ್ರಭು ಭಾಗವಹಿಸಿ, ತಮ್ಮ “Medicinal wax from Kokum seeds” (Ko-Wax) ವಿಜ್ಞಾನ ಯೋಜನೆಯನ್ನು ಪ್ರಸ್ತುತಪಡಿಸಿರುತ್ತಾರೆ.

ಪೃಥ್ವಿರಾಜ್ ಪ್ರಭು ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಸಂದರ್ಭದಲ್ಲಿ ತಯಾರಿಸಿ, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆದರೆ ಆ ಶೈಕ್ಷಣಿಕ ವರ್ಷದಲ್ಲಿ ಕೊರೋನ ಕಾರಣದಿಂದಾಗಿ ಸ್ಪರ್ಧೆಗಳು ನಡೆಯದಿರುವ ಕಾರಣ ಮುಂದೂಡಲ್ಪಟ್ಟ  ಸ್ಪರ್ಧೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನಡೆದಿದ್ದು, ಯಶಸ್ವಿಯಾಗಿ ಭಾಗವಹಿಸಿ,  ಆಯೋಜಕರಿಂದ ಮೆಚ್ಚುಗೆ ಗಳಿಸಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

LEAVE A REPLY

Please enter your comment!
Please enter your name here