ಮಂಗಳೂರಿನಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಬೃಹತ್ ಸಮಾವೇಶ-ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ

0

ವಿಟ್ಲ: ಮಂಗಳೂರಿನ ಟೌನ್ ಹಾಲ್ ನಲ್ಲಿ ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರ ಅಭಿನಂದನಾ ಸಮಾರಂಭ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆಯು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಲ್ಪಸಂಖ್ಯಾತ ಸಮಿತಿಯ ನೇತೃತ್ವದಲ್ಲಿ ವಿಟ್ಲದಲ್ಲಿರುವ ಬ್ಲಾಕ್ ಕಚೇರಿಯಲ್ಲಿ ನಡೆಯಿತು.ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ.ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೆಪಿಸಿಸಿ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷರಾದ ಕೆ. ಶಾಹುಲ್ ಹಮೀದ್, ಕೆಪಿಸಿಸಿ ಅಲ್ಪಸಂಖ್ಯಾತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಪ್ರಕಾಶ್, ಕೆಪಿಸಿಸಿ ಜಿಲ್ಲಾ ಕೋಶಾಧಿಕಾರಿ ಮೊಹಮ್ಮದ್ ಬಪ್ಪಳಿಗೆ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕರೀಂ ಕುದ್ದುಪದವು, ಕೆಪಿಸಿಸಿ ರಾಜ್ಯ ಸಂಚಾಲಕ ಹಬೀಬಲ್ಲಾ ಕನ್ನೂರು, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ರಮಾನಾಥ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರುಗಳಾದ ವಿಕೆಎಂ ಅಶ್ರಫ್, ವಿ ಅಬ್ದುಲ್ ರಹಿಮಾನ್, ಪುತ್ತೂರು ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ಬ್ಲಾಕ್ ಪ್ರದಾನ ಕಾರ್ಯದರ್ಶಿ ವಿ ಎ ರಶೀದ್, ಪಕ್ಷದ ಪ್ರಮುಖರಾದ ಎಂ ಕೆ ಮುಸಾ, ಶೇಕ್ ಅಲಿ ಸೆರಾಜೆ, ಅಬ್ದುಲ್ ನಾಸಿರ್ ಕೋಲ್ಪೆ, ಸಿದ್ದಿಕ್ ಕೆಂಪಿ, ಅಬ್ದುಲ್ ರಹಿಮಾನ್ ಕುರುಂಬಳ, ಅಸ್ಮಾ ಉಮರ್, ಶರೀಫ್ ಬುಳೇರಿಕಟ್ಟೆ, ಡಿ ಎಂ ರಶೀದ್, ಹಾರಿಸ್, ಎಂ ಎಸ್ ಅಬ್ದುಲ್ಲಾ , ಹನೀಫ್ ಹಳೆಮನೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here