ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ ದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ವಿಟ್ಲ: ಮಾಣಿ ಪೆರಾಜೆ ವಿದ್ಯಾನಗರ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಕ್ರೀಡಾಕೂಟದ ಬಾಲಕರ ವಿಭಾಗದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿತ್ ರವರು 800 ಮೀಟರ್ ಓಟದಲ್ಲಿ ಪ್ರಥಮ, 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ಇಬ್ರಾಹಿಂ ಪವಾಜ್ 100 ಮೀಟರ್ ಓಟದಲ್ಲಿ ಮತ್ತು ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಹಿಂದಿ ಶಿಕ್ಷಕರಾದ ಜಯರಾಮ್ ಕಾಂಚನರವರು ತರಬೇತಿ ನೀಡುತ್ತಾರೆ. ಶಾಲಾ ಮುಖ್ಯ ಶಿಕ್ಷಕರಾದ ಎಸ್.ಚೆನ್ನಪ್ಪ ಗೌಡ ರವರು ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here