ರಾಮಕುಂಜ ಪ್ರೌಢಶಾಲೆಯಲ್ಲಿ ನಾಟಕ ತರಬೇತಿಯ ಸಮಾರೋಪ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿಶ್ವೇಶ ಸೇವಾ ಸಮಿತಿ ಶಿಬಿರದ ಪ್ರಯುಕ್ತ ಹಮ್ಮಿಕೊಂಡ ನಾಟಕ ತರಬೇತಿಯ ಸಮಾರೋಪ ಶಾಲೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿ ಕಷ್ಣಪ್ಪ ದೇವಾಡಿಗ ವಹಿಸಿದ್ದರು. ಕಡಬ ಸರಕಾರಿ ಹಿ.ಪ್ರಾ.ಶಾಲೆ ಮುಖ್ಯಶಿಕ್ಷಕ ಆನಂದ ಅಜಿಲರವರು ಸಮಾರೋಪ ಭಾಷಣ ಮಾಡಿದರು. ಅತಿಥಿಯಾಗಿದ್ದ ಕೊಯಿಲ ಶಾಲಾ ಸಹಶಿಕ್ಷಕಿ ರೇಖಾರವರು ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳು, ಮೊಬೈಲ್ ಬಳಕೆಯಿಂದ ಉಂಟಾಗುವ ಸಮಸೈಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಸತೀಶ್ ಭಟ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಾಟಕ ತರಬೇತಿ ನೀಡಿದ ರಂಗಭೂಮಿ ತರಬೇತುದಾರ ಮೌನೇಶ್ ವಿಶ್ವಕರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಸಾನಿಧ್ಯ ಸ್ವಾಗತಿಸಿ, ಕಲ್ಪಿತಾ ವಂದಿಸಿದರು. ಜ್ಯೋತಿ ನಿರೂಪಿಸಿದರು. ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ, ಶಿಕ್ಷಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ವ್ಯವಸ್ಥಿತಗೊಳಿಸಿದ್ದರು.

LEAVE A REPLY

Please enter your comment!
Please enter your name here