ಸ್ಕೂಟರ್ ಡಿಕ್ಕಿ -ಪಾದಚಾರಿಗೆ ಗಾಯ

0

ಪುತ್ತೂರು: ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಪುತ್ತೂರು ದರ್ಬೆ ಅಶ್ವಿನಿ ಸರ್ಕಲ್ ಬಳಿ ಅ.12ರಂದು ನಡೆದಿದೆ.
ಪಾದಚಾರಿ ಬೆಂಗಳೂರು ರಾಮನಗರ ಬಿಡದಿ ಹೋಬಳಿಯ ರವಿಶ(33ವ) ಎಂಬವರು ಗಾಯಾಳು. ಅವರು ದರ್ಬೆ ಅಶ್ವಿನಿ ಸರ್ಕಲ್ ಬಳಿ ಡಾಮಾರು ಅಂಚಿನಲ್ಲಿ ನಡೆದು ಕೊಂಡು ಹೋಗುತ್ತಿದ್ದ ಸಂದರ್ಭ ಸ್ಕೂಟರ್‌ವೊಂದು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿ ರವೀಶ ಅವರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನೆ ಕುರಿತು ಅ.13ರಂದು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here