ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

0

ಪುತ್ತೂರು: ಅ.15ರಂದು ಬೆಳಿಗ್ಗೆ 9 ಗಂಟೆಯಿಂದ ಪುತ್ತೂರು ಮಂಜಲ್ಪಡುಪು ಸುಧಾನ ವಸತಿ ಶಾಲೆಯಲ್ಲಿ ಬೇಲೂರಿನ ನಾಟ್ಯ ಮಯೂರಿ ಲಾಲಿತ್ಯ ಕುಮಾರ್ ಇವರ ಹುಟ್ಟುಹಬ್ಬದ ಪ್ರಯುಕ್ತ ಸುಧಾನ ವಿದ್ಯಾ ಸಂಸ್ಥೆ, ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್, ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಹೊಸಬೆಳಕು ಬಡವರ ಆಶಾಕಿರಣ ಸೇವಾ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಆಸ್ಪತ್ರೆ ಇವರಿಂದ ಉಚಿತ ನೇತ್ರ ಚಿಕಿತ್ಸೆ ಹಾಗೂ ತಪಾಸಣೆ ಶಿಬಿರ ನಡೆಯಲಿದೆ. ಆಸಕ್ತರು ಪ್ರಯೋಜನ ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here