ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೈಲುಗುತ್ತು ಕುಟುಂಬಸ್ಥರಿಂದ ಅನ್ನದಾನ ಸೇವೆ

0

ಪುಣಚ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.15 ರಿಂದ ಅ.23ರವರೆಗೆ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತವಾಗಿ ನವರಾತ್ರಿಯ ಪ್ರಥಮ ದಿನ ಬೈಲುಗುತ್ತು ಕುಟುಂಬಸ್ಥರು ಮತ್ತು ಬಂಧುಗಳಿಂದ ಮಧ್ಯಾಹ್ನ ಅನ್ನದಾನ ಸೇವೆ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಗದ್ದಿಗೆ ಏರುವ ಕಾರ್ಯಕ್ರಮದೊಂದಿಗೆ ಪ್ರಾರ್ಥನೆ ನಡೆಯಿತು. ಬೈಲುಗುತ್ತು ಕುಟುಂಬಸ್ಥರು ಮತ್ತು ಬಂಧುಗಳಿಂದ ವರ್ಷಂಪ್ರತಿ ಸಂಪ್ರದಾಯದಂತೆ ದೇವರ ನಿತ್ಯ ನೈವೇದ್ಯಕ್ಕೆ ಒಂದು ಕಿಂಟ್ವಾಲು ಅಕ್ಕಿಯನ್ನು ಈ ಸಂದರ್ಭದಲ್ಲಿ ಸಮರ್ಪಿಸಲಾಯಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.


ಬೈಲುಗುತ್ತು ಕುಟುಂಬದ ಯಜಮಾನ ಜಗನ್ನಾಥ್ ರೈ ಬೈಲುಗುತ್ತು, ಕುಟುಂಬಸ್ಥರು, ಬಂಧುಗಳು ಹಾಗೂ ಅನೇಕ ಭಕ್ತಮಹಾಶಯರು ಉಪಸ್ಥಿತರಿದ್ದು ಅನ್ನ ಪ್ರಸಾದ ಸ್ವೀಕರಿಸಿದರು.
ರಾತ್ರಿ ಭಜನಾ ಕಾರ್ಯಕ್ರಮ, ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here