ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಹಗಲು ಕೋಲ, ಅಗೇಲು ಸೇವೆ

0

ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಅ.15ರಂದು ಮಧ್ಯಾಹ್ನ ದೈವಗಳಿಗೆ ಹಗಲು ಕೋಲ, ಅಗೇಲು ಸೇವೆ ನಡೆದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ಮಧ್ಯಾಹ್ನ 12 ಗಂಟೆಯಿಂದ ಕೆಂಡದರ್ಶನ ಸೇವೆ, ಅಗ್ನಿ ಕಲ್ಲುರ್ಟಿ ಮತ್ತು ಸ್ವಾಮಿ ಕೊರಗಜ್ಜ ದೈವಕ್ಕೆ ಕೋಲ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ. ಪ್ರತಿ ಆದಿತ್ಯವಾರ ಮಧ್ಯಾಹ್ನ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ. ಪ್ರತಿ ಸೋಮವಾರ, ಮಂಗಳವಾರ, ಶುಕ್ರವಾರ ಮತ್ತು ಶನಿವಾರ ಪ್ರಶ್ನಾ ಚಿಂತನೆ ಹಾಗೂ ಬುಧವಾರ, ಗುರುವಾರ ಸೂಚಿತ ಪರಿಹಾರ ಕಾರ್ಯ ನಡೆಯುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.


ನಾಳೆ ಸಂಕ್ರಮಣ ಕೋಲ:
ಅ.17ರಂದು ಮಧ್ಯಾಹ್ನ 12 ಗಂಟೆಯಿಂದ ಕ್ಷೇತ್ರದಲ್ಲಿ ಸಂಕ್ರಮಣದ ಪ್ರಯುಕ್ತ ಕೆಂಡದರ್ಶನ, ಕೋಲೋತ್ಸವ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here