ಕೊಕ್ಕಡ ’ಕಪಿಲಾ’ ಜೇಸಿಐ-ಅಧ್ಯಕ್ಷ: ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ: ಅಕ್ಷತ್ ರೈ

0

ನೆಲ್ಯಾಡಿ: ಜೇಸಿಐ ಕೊಕ್ಕಡ ಕಪಿಲಾ ಘಟಕದ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಳೆಂಜ ಗ್ರಾಮದ ಶಿಬರಾಜೆ ನಿವಾಸಿ ಸಂತೋಷ್ ಕುಮಾರ್ ಜೈನ್ ಹಾಗೂ ಕಾರ್ಯದರ್ಶಿಯಾಗಿ ಅಕ್ಷತ್ ರೈ ಅವರು ಆಯ್ಕೆಯಾಗಿದ್ದಾರೆ.


ಅ.15ರಂದು ಶಿಬರಾಜೆ ಪಾದೆಯಲ್ಲಿನ ಗ್ರಾಮಾಭ್ಯದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಸಭಾಂಗಣದಲ್ಲಿ ಅಧ್ಯಕ್ಷ ಜಿತೇಶ್ ಎಲ್.ಪಿರೇರಾ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಅಕ್ಷತ್ ಅವರು ಜೇಸಿ ವಾಣಿ ವಾಚಿಸಿದರು. ಜೆಸಿಂತಾ ಡಿ ಸೋಜ, ಜೋಸೆಫ್ ಪಿರೇರಾ, ಪಿ.ಟಿ. ಸೆಬಾಸ್ಟಿಯನ್, ಜಸ್ವಂತ್ ಪಿರೇರಾ ಶುಭ ಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಅವರು ಚುನಾವಣೆಯನ್ನು ನಡೆಸಿಕೊಟ್ಟರು. ನಿತ್ಯಾನಂದ ರೈ, ಬಾಲಕೃಷ್ಣ ದೇವಾಡಿಗ, ವಿನೋದ ಗೌಡ, ಸುಖಲತಾ ರೈ, ವಸಂತ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

LEAVE A REPLY

Please enter your comment!
Please enter your name here