ಅ.19ರಿಂದ ಅ.21 : ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಮತ್ತೊಮ್ಮೆ ಅವಕಾಶ  

0

ಪುತ್ತೂರು :ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಮತ್ತೊಮ್ಮೆ ಅವಕಾಶ  ಆಹಾರ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ. ಅ.19ರಿಂದ ಅ.21 ರವರೆಗೆ ದಕ್ಷಿಣ ಕನ್ನಡ ಸೇರಿದಂತೆ ಇತರ ಜಿಲ್ಲೆಗಳಲ್ಲಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆ ಆಹಾರ ಇಲಾಖೆಯಿಂದ ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ವಿಭಾಗವಾರು ಒಟ್ಟು 9 ದಿನ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ  ಸರ್ವರ್ ಸಮಸ್ಯೆಯಿಂದ ಕೆಲವೇ ಗ್ರಾಹಕರಿಗೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗಿತ್ತು. ಈ ಸಂಬಂಧ ಇನ್ನೂ ಅರ್ಜಿ ಸಲ್ಲಿಸಲು ಹೆಚ್ಚು ಜನರು ಇರುವುದರಿಂದ ಮತ್ತೊಮ್ಮೆ ವಿಭಾಗವಾರು ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ದಕ್ಷಿಣಕನ್ನಡ, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರಕನ್ನಡ, ವಿಜಯಪುರ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ದಿನಾಂಕ 19-10-2023 ರಿಂದ 21-10-2023 ರವರೆಗೆ ಅವಕಾಶ ಮಾಡಿಕೊಡಲಾಗಿದೆ.

LEAVE A REPLY

Please enter your comment!
Please enter your name here