![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕಾಯಿಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮವು ಅ 16ರಂದು ನಡೆಯಿತು. ದೇವಸ್ಥಾನದ ಅರ್ಚಕರಾದ ಈಶ್ವರಚಂದ್ರ ಭಟ್ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು. ಪೂಜೆ ಬಳಿಕ ಭಕ್ತಾಧಿಗಳಿಗೆ ಕದಿರು ವಿತರಿಸಲಾಯಿತು.
![](https://puttur.suddinews.com/wp-content/uploads/2023/10/3f90fe0a-2979-4685-ab67-4943646fb7f4.jpg)