ಸುಳ್ಯ ಕೆ.ವಿ.ಜಿ.ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ|ರಾಮಕೃಷ್ಣ ಕೊಲೆ ಪ್ರಕರಣ-ಡಾ.ರೇಣುಕಾಪ್ರಸಾದರಿಂದ ಸುಪ್ರೀಂ ಕೋಟ್‌ಗೆ ಮೇಲ್ಮನವಿ:ಅ.17 ವಿಚಾರಣೆ

0

ಈ ಪ್ರಕರಣದಲ್ಲಿ ಆರೋಪಿಗಳಾಗಿ ವಿಚಾರಣೆ ಎದುರಿಸಿ ಪುತ್ತೂರು ಜಿಲ್ಲಾ ನ್ಯಾಯಾಲಯದಿಂದ ನಿರಪರಾಧಿಗಳೆಂದು ಬಿಡುಗಡೆಗೊಳಿಸಲ್ಪಟ್ಟ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್.ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಮತ್ತು ಶರಣ್ ಆಕಾಶಭವನ ಇವರುಗಳು ಅಪರಾಧಿಗಳು ಎಂದು ಹೈಕೋರ್ಟ್ ಘೋಷಿಸಿತ್ತು.ಹೈಕೋರ್ಟ್ ಆದೇಶದಂತೆ ಅ.5ರಂದು ನ್ಯಾಯಾಲಯಕ್ಕೆ ಹಾಜರಾದ ಐವರು ಆರೋಪಿಗಳಿಗೂ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.ಜೊತೆಗೆ ಡಾ.ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ.ದಂಡವನ್ನೂ ವಿಧಿಸಲಾಗಿದ್ದು,ಅದನ್ನು ಕೊಲೆಗೀಡಾದ ರಾಮಕೃಷ್ಣ ಅವರ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.ಅಪರಾಧಿಯಾಗಿ ಘೋಷಿಸಲ್ಪಟ್ಟಿರುವ ಶರಣ್ ಆಕಾಶಭವನ್ ನ್ಯಾಯಾಲಯಕ್ಕೆ ಶರಣಾಗದೇ ಇದ್ದುದರಿಂದ ಆತನ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.

ಪುತ್ತೂರು:ಹನ್ನೆರಡು ವರ್ಷಗಳ ಹಿಂದೆ ನಡೆದಿರುವ ಸುಳ್ಯ ಕೆ.ವಿ.ಜಿ.ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ|ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಐವರು ಅಪರಾಧಿಗಳ ಪೈಕಿ ಡಾ.ರೇಣುಕಾಪ್ರಸಾದ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.ಡಾ.ರೇಣುಕಾಪ್ರಸಾದ್ ಅವರಿಗೆ ವಿಧಿಸಲಾಗಿರುವ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಅವರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ಅ.17ರಂದು ಮೇಲ್ಮನವಿಯ ವಿಚಾರಣೆ ನಡೆಯಲಿದೆ.

ಈ ಪ್ರಕರಣದಲ್ಲಿ ಆರೋಪಿಗಳಾಗಿ ವಿಚಾರಣೆ ಎದುರಿಸಿ ಪುತ್ತೂರು ಜಿಲ್ಲಾ ನ್ಯಾಯಾಲಯದಿಂದ ನಿರಪರಾಧಿಗಳೆಂದು ಬಿಡುಗಡೆಗೊಳಿಸಲ್ಪಟ್ಟ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್.ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಮತ್ತು ಶರಣ್ ಆಕಾಶಭವನ ಇವರುಗಳು ಅಪರಾಧಿಗಳು ಎಂದು ಹೈಕೋರ್ಟ್ ಘೋಷಿಸಿತ್ತು.ಹೈಕೋರ್ಟ್ ಆದೇಶದಂತೆ ಅ.5ರಂದು ನ್ಯಾಯಾಲಯಕ್ಕೆ ಹಾಜರಾದ ಐವರು ಆರೋಪಿಗಳಿಗೂ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.ಜೊತೆಗೆ ಡಾ.ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ.ದಂಡವನ್ನೂ ವಿಧಿಸಲಾಗಿದ್ದು,ಅದನ್ನು ಕೊಲೆಗೀಡಾದ ರಾಮಕೃಷ್ಣ ಅವರ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.ಅಪರಾಧಿಯಾಗಿ ಘೋಷಿಸಲ್ಪಟ್ಟಿರುವ ಶರಣ್ ಆಕಾಶಭವನ್ ನ್ಯಾಯಾಲಯಕ್ಕೆ ಶರಣಾಗದೇ ಇದ್ದುದರಿಂದ ಆತನ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.

ಡಾ.ರೇಣುಕಾಪ್ರಸಾದ್ ಸುಪ್ರೀಂ ಕೋರ್ಟ್ಗೆ: ಈ ಪ್ರಕರಣದಲ್ಲಿ ಡಾ.ರೇಣುಕಾಪ್ರಸಾದ್ ಅವರಿಗೆ ಶಿಕ್ಷೆ ವಿಧಿಸಿರುವ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.ಅವರ ವಕೀಲರಾದ ಸಿದ್ಧಾರ್ಥ ಲೂಕ್ರಾ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದ್ದು ಈಗಾಗಲೇ ಮೇಲ್ಮನವಿಯನ್ನು ಸರ್ವೋಚ್ಛ ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿದ್ದು ಅ.17ರಂದು ಹಿಯರಿಂಗ್ ನಡೆಯಲಿದೆ.

ಡಾ.ರೇಣುಕಾಪ್ರಸಾದ್ ಜಯದೇವ ಆಸ್ಪತ್ರೆಗೆ ಶಿಫ್ಟ್: ಡಾ.ರೇಣುಕಾಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಿಂದ ಬೆಂಗಳೂರು ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಜೀವಾವಧಿ ಶಿಕ್ಷೆ ಘೋಷಣೆಯಾದಾಗ, 63 ವರ್ಷ ವಯಸ್ಸಿನ ನಾನು ಮಾನಸಿಕವಾಗಿ ಜರ್ಝರಿತನಾಗಿದ್ದು ಆರೋಗ್ಯ ಸ್ಥಿತಿಯೂ ಹದಗೆಟ್ಟಿದೆಯೆಂದು ಡಾ.ರೇಣುಕಾಪ್ರಸಾದ್ ಅವರು ನ್ಯಾಯಾಧೀಶರೆದುರು ಹೇಳಿದ ಕಾರಣ ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ, ಡಾ.ರೇಣುಕಾಪ್ರಸಾದ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದರಿಂದ ಕಾಯಿಲೆಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅ.13ರಂದು ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ ಬಳಿಕ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

2011ರಲ್ಲಿ ನಡೆದಿತ್ತು ಕೊಲೆ: 2011ರ ಏಪ್ರಿಲ್ 28ರಂದು ಸಂಜೆ 7.45ರ ವೇಳೆಗೆ ಸುಳ್ಯದ ಅಂಬಟೆಡ್ಕ ಬಳಿಯ ಶ್ರೀ ಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಕೊಚ್ಚಿ ಕೊಲೆ ನಡೆಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗಳಾಗಿ ವಿಚಾರಣೆ ಎದುರಿಸಿದ್ದ ಡಾ.ರೇಣುಕಾಪ್ರಸಾದ್ ಸಹಿತ ಏಳು ಮಂದಿಯನ್ನೂ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರಪರಾಧಿಗಳೆಂದು ಪರಿಗಣಿಸಿ ಖುಲಾಸೆಗೊಳಿಸಿ ತೀರ್ಪು ನೀಡಿತ್ತು.ಈ ತೀರ್ಪನ್ನು ಪ್ರಶ್ನಿಸಿ ಸರಕಾರದ ವತಿಯಿಂದ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್,ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿ ಸೆ.27ರಂದು ತೀರ್ಪು ಪ್ರಕಟಿಸಿತ್ತು.

ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.ಅಪರಾಧಿಗಳು ಅ.5ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದೂ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿತ್ತು.ಅದರಂತೆ, ಶರಣ್ ಆಕಾಶಭವನ ಹೊರತುಪಡಿಸಿ ಅ.5ರಂದು ನ್ಯಾಯಾಲಯಕ್ಕೆ ಹಾಜರಾದ ಐವರು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿತ್ತು.ಇದೀಗ, ಡಾ.ರೇಣುಕಾಪ್ರಸಾದ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here