ಅಗಲಿದ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಶಾಸಕರು

0

ಪುತ್ತೂರು:ನೆಲ್ಲಿಕಟ್ಟೆ ನಿವಾಸಿ ನಗರಸಭಾ ಸದಸ್ಯ ಶಕ್ತಿಸಿನ್ಹಾ ಅವರು ಅ.17 ರಂದು ಹೃದಯಾಘಾತದಿಂದ ನಿಧನರಾಗಿದ್ದು.ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಆಸ್ಪತ್ರೆಗೆ ತೆರಳಿ ಮೃತರ ಅಂತಿಮ ದರ್ಶನ ಪಡೆದರು. ಶಾಸಕರೊಂದಿಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ,ಮೊಹಮ್ಮದ್‌ ಬಡಗನ್ನೂರು, ಕೃಷ್ಣಪ್ರಸಾದ್‌ ಆಳ್ವ ಮತ್ತಿತರರು ಅಂತಿಮ ದರ್ಶನ ಪಡೆದರು.

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಬೆಳಿಗ್ಗೆ ಶಕ್ತಿಸಿನ್ಹಾ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಅದಾಗಲೆ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು . ಮೃತರು ಇಬ್ಬರು ಪುತ್ರಿಯರು ಮತ್ತು ಅಳಿಯನನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ನಾಳೆ ನಡೆಸಲಾಗುವುದು ಎಂದು ಆಪ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here