ಪುತ್ತೂರು: ಈಶ ವಿದ್ಯಾಲಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಗಾರ

0

ಪುತ್ತೂರು: ಈಶ ಎಜ್ಯುಕೇಶನಲ್ & ಸೋಶಿಯಲ್ ಸರ್ವೀಸ್ ಟ್ರಸ್ಟ್ ನ ಆಡಳಿತದಲ್ಲಿ ನಡೆಸಲ್ಪಡುವ ಈಶ ವಿದ್ಯಾಲಯದಲ್ಲಿ ಒಂದು ದಿನದ ವ್ಯಕ್ತಿತ್ವ ವಿಕಸನ ಕಾರ್ಯಗಾರ ನಡೆಯಿತು.
ಈಶ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ಪುತ್ತೂರಿನ ಖ್ಯಾತ Soft Skill ತರಬೇತುದಾರ ದಾಮೋದರ ಪಾಟಾಳಿ SSLC,PUC ಹಾಗೂ DMEd ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಬಗ್ಗೆ ಮಾಹಿತಿ ಹಾಗೂ ವಿವಿಧ ಚಟುವಟಿಕೆಗಳ ತರಬೇತಿ ನೀಡಿದರು.


ಈ ಸಂದರ್ಭದಲ್ಲಿ ಉಪನ್ಯಾಸಕರ ವೃಂದ, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರಾಂಶುಪಾಲಗೋಪಾಲಕೃಷ್ಣ ಈಶ ಸ್ವಾಗತಿಸಿ, ಉಪನ್ಯಾಸಕಿಯರಾದ ಸ್ವಾತಿ ವಂದಿಸಿ, ರಕ್ಷಾ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here