ಕೆಮ್ಮಾಯಿ: ರಸ್ತೆಯಲ್ಲೇ ಹರಿದ ಮಳೆ ನೀರು-ವಾಹನ ಸವಾರರ ಪರದಾಟ

0

ಪುತ್ತೂರು: ಅ.17ರಂದು ಸಂಜೆ ಸುರಿದ ಮಳೆಗೆ ಕೆಮ್ಮಾಯಿ ಬಳಿ ಮುಖ್ಯ ರಸ್ತೆಯಲ್ಲೇ ಮಳೆ ನೀರು ಹರಿದು ಹೋಗಿದ್ದು ವಾಹನ ಸವಾರರು ಪರದಾಟ ನಡೆಸುವಂತಾಯಿತು. ಮಳೆಯ ನೀರು ಧಾರಾಕಾರವಾಗಿ ಮುಖ್ಯ ರಸ್ತೆಯಲ್ಲಿ ಹರಿದ ಪರಿಣಾಮ ಅದೇ ರಸ್ತೆಯಾಗಿ ಸಂಚರಿಸುತ್ತಿದ್ದ ಹಲವರು ವಾಹನಗಳಿಗೆ ತೊಂದರೆ ಉಂಟಾಯಿತು. ನೀರು ಹರಿಯಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದೇ ಮಳೆ ನೀರು ರಸ್ತೆಯಲ್ಲೇ ಹರಿಯಲು ಕಾರಣ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಗೆ ಪರಿಹಾರ ಒದಗಿಸಕೊಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here