ನಾಳೆ(ಅ.19): ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ದಲ್ಕಾಜೆ ಗುತ್ತು ಕುಟುಂಬಸ್ಥರಿಂದ ಅನ್ನದಾನ- ರಂಗಪೂಜೆ ಸೇವೆ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.15ರಿಂದ ಅ.23ರವರೆಗೆ ನಡೆಯುತ್ತಿರುವ ನವರಾತ್ರಿ ಉತ್ಸವದ ಪ್ರಯುಕ್ತವಾಗಿ ವರ್ಷಂಪ್ರತಿಯಂತೆ ನವರಾತ್ರಿಯ 5ನೇ ದಿನ ದಲ್ಕಾಜೆ ಗುತ್ತು ಕುಟುಂಬಸ್ಥರು ಮತ್ತು ಬಂಧುಗಳಿಂದ ಮಧ್ಯಾಹ್ನ ಅನ್ನದಾನ ಸೇವೆ, ರಾತ್ರಿ ರಂಗಪೂಜೆ ನಡೆಯಲಿದೆ.
ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.
ಬೆಳಿಗ್ಗೆ 10ರಿಂದ ಶ್ರೀ ಮಹಿಷಮರ್ದಿನಿ ಮಹಿಳಾ ಭಜನಾ ಮಂಡಳಿ ಮೂಡಂಬೈಲು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಭಜನೆ, ರಂಗಪೂಜೆ ಪ್ರಸಾದ ವಿತರಣೆ ನಡೆಯಲಿದೆ ಎಂದು ದಲ್ಕಾಜೆ ಗುತ್ತು ಕುಟುಂಬಸ್ಥರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here