ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ದಲ್ಕಾಜೆಗುತ್ತು ಕುಟುಂಬಸ್ಥರಿಂದ ಅನ್ನದಾನ ಸೇವೆ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.15ರಿಂದ ನಡೆಯುತ್ತಿರುವ ನವರಾತ್ರಿ ಉತ್ಸವದ ಪ್ರಯುಕ್ತವಾಗಿ ವರ್ಷಂಪ್ರತಿಯಂತೆ ನವರಾತ್ರಿಯ 5ನೇ ದಿನ ದಲ್ಕಾಜೆಗುತ್ತು ಕುಟುಂಬಸ್ಥರು ಮತ್ತು ಬಂಧುಗಳಿಂದ ಮಧ್ಯಾಹ್ನ ಅನ್ನದಾನ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಪ್ರಾರ್ಥನೆ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬೆಳಿಗ್ಗೆ 10 ರಿಂದ ಶ್ರೀ ಮಹಿಷಮರ್ದಿನಿ ಮಹಿಳಾ ಭಜನಾ ಮಂಡಳಿ ಮೂಡಂಬೈಲು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ದಲ್ಕಾಜೆ ಗುತ್ತು ಕುಟುಂಬಸ್ಥರು, ಬಂಧುಗಳು ಹಾಗೂ ಅನೇಕ ಭಕ್ತ ಮಹಾಶಯರು ಉಪಸ್ಥಿತರಿದ್ದು ಅನ್ನ‌ ಪ್ರಸಾದ ಸ್ವೀಕರಿಸಿದರು. ರಾತ್ರಿ ಭಜನಾ ಕಾರ್ಯಕ್ರಮ, ರಂಗಪೂಜೆ‌ ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here