ರಾಜ್ಯಮಟ್ಟದ ಈಜು ಸ್ಪರ್ಧೆ: ಫಿಲೋಮಿನಾ ಹಿರಿಯ ಪ್ರಾಥಮಿಕ ಶಾಲೆಯ ಲಿಖಿತ್ ರಾಮಚಂದ್ರ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಬೆಂಗಳೂರಿನ ಬಸವನಗುಡಿ ಈಜು ಕೊಳದಲ್ಲಿ ಅ.16 ಮತ್ತು 17ರಂದು ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಲಿಖಿತ್ ರಾಮಚಂದ್ರ ರವರು 2ಬೆಳ್ಳಿ ಮತ್ತು 2 ಕಂಚಿನ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ 14 ವರ್ಷ ವಯೋಮಿತಿಯೊಳಗಿನ ಬಾಲಕರ ಸ್ಟೈಲ್ ರಿಲೇ ತಂಡಕ್ಕೆ ಸಹ ಆಯ್ಕೆಯಾಗಿದ್ದಾರೆ.

ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನ ಪುತ್ತೂರು ಇಲ್ಲಿನ ಪುತ್ತೂರು ಅಕ್ವಾಟಿಕ್ ಕ್ಲಬ್ ನ ತರಬೇತುದಾರರಾದ ಪಾರ್ಥ ವಾರಣಾಸಿ, ದೀಕ್ಷಿತ್ ರಾವ್, ರೋಹಿತ್ ಹಾಗು ನಿರೂಪ್ ರವರಿಂದ ಈಜು ತರಬೇತಿ ಪಡೆಯುತ್ತಿರುವ ಇವರು ಪುತ್ತೂರು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ ಹಾಗೂ ದೀಪಾರಾಣಿ ಯವರ ಪುತ್ರ.

LEAVE A REPLY

Please enter your comment!
Please enter your name here